ರಾಜ್ಯ ಸುದ್ದಿ: ಚಿತ್ರದುರ್ಗ ತಾಲೂಕಿನ ತಮಟಗಲ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಭಾನುವಾರ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಇನ್ನೊವಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು , ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 06 ಜನರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ವಾಪಸಾಗುತ್ತಿದ್ದರು ಎನ್ನಲಾಗಿದೆ.ಮೃತಪಟ್ಟವರ ಪೈಕಿ ಬೆಂಗಳೂರಿನ ಮೂಲದ ಶಾಂತಮೂರ್ತಿ (60) , ರುದ್ರಸ್ವಾಮಿ (52) , ಚಿದರಂಬರಾಚಾರ್ (50) , ಮಲ್ಲಿಕಾರ್ಜುನ (50) ಎಂದು ಗುರುತಿಸಿದ್ದು , ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.
ಬೆಂಗಳೂರು ಕಡೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಲಾರಿ ತಮಟಗಲ್ಲು ಬಳಿ ರಸ್ತೆ ಬದಿಯಲ್ಲಿ ನಿಂತಿತ್ತು. ಹಿಂದಿಯಿಂದ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು , ಡಿಕ್ಕಿಯ ರಭಸಕ್ಕೆ ಕಾರು ನುಜ್ಜಾಗಿದೆ, ಅತಿ ವೇಗ ಮತ್ತು ಕಾರು ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.ಘಟನೆಯ ಕುರಿತು ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.